LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವದುರ್ಗ ಮೂಲದ ಪೇದೆ ಆತ್ಮಹತ್ಯೆ : ದೇಹ ಪತ್ತೆಗೆ 250 ಸಿಸಿ ಕ್ಯಾಮರಾ ಪರಿಶೀಲನೆ..?

K2kannadanews.in

Constable suicide Case : ಇತ್ತೀಚೆಗೆ ರಾಯಚೂರಿನ ದೇವದುರ್ಗ ಮೂಲದ‌ ಮಡಿವಾಳ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಶಿವರಾಜ್ ಆತ್ಮಹತ್ಯೆಗೆ ಶರಣಾಗಿದ್ದು ಅವರ ದೇಹವನ್ನು ಪತ್ತೆ ಮಾಡಲು ಪೊಲೀಸರು ಮಾಡಿದ್ದೇನು ಗೊತ್ತಾ. ದೇಹ ಪತ್ತೆಗಾಗಿ 250 ಸಿಸಿ ಕ್ಯಾಮರಾಗಳ ಪರಿಶೀಲನೆ ಮಾಡಲಾಗಿದೆ ಎಂಬ ವಿಚಾರ ತಿಳಿದು ಬಂದಿದೆ.

ಹೌದು ಜೂನ್ 25ರಂದು ಕಾಣೆಯಾಗಿದ್ದ ಕಾನ್ಸ್‌ಟೇಬಲ್ ಶಿವರಾಜ್ ಗಾಗಿ ಪೊಲೀಸರು ಹುಟುಕಾಟ ನಡೆಸಿದ್ದರು. ಸುಬ್ರಮಣ್ಯಪುರ ಪೊಲೀಸರು ಹಾಗೂ ಮಡಿವಾಳ ಪೊಲೀಸರಿಂದ ಶಿವರಾಜ್ ಅವರನ್ನು ಹುಡುಕಲಾಗುತ್ತಿತ್ತು. ಅವರ ಪತ್ತೆಗಾಗಿ ಹಲವಾರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಲಾಗಿದೆ. ಐದು ದಿನಗಳ ಹುಟುಕಾಟದ ಬಳಿಕ ಶಿವರಾಜ್ ಮೃತದೇಹ ಪತ್ತೆಯಾಗಿದೆ. ಮೆಟ್ರೋ ಸ್ಟೇಷನ್‌ ಬಳಿ ಬೈಕ್ ಪಾರ್ಕಿಂಗ್ ಮಾಡಿದ್ದ ಶಿವರಾಜ್ ಅವರು ಬಳಿಕ ಎಲ್ಲಿಗೆ ಹೋಗಿದ್ದಾರೆ ಎನ್ನುವುದು ಗೊತ್ತಾಗಿರಲಿಲ್ಲ. ವಾಟರ್ ಬಾಟಲ್ ಹಿಡಿದು ವಿವಿ ಒಳಗೆ ಹೋಗಿರುವುದು ಮಾತ್ರ ಗೊತ್ತಾಗಿತ್ತು. ಇದೇ ಆಧಾರದ ಮೇಲೆ ಆ ಭಾಗದ ಸುತ್ತಮುತ್ತಲಿನ ಸಿಸಿಟಿವಿ ಕಾಮೆರಾಗಳನ್ನು ಪರಿಶೀಲನೆ ಮಾಡಲಾಗಿದೆ. ಸುಬ್ರಣ್ಯಪುರದಿಂದ ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ಸ್ಟೇಷನ್‌ವರೆಗೂ ಸಿಸಿಟಿವಿ ಪರಿಶೀಲನೆ ಮಾಡಲಾಗಿತ್ತು. ಆದರೆ ಎಲ್ಲೂ ಕೂಡ ಪತ್ತೆಯಾಗಿರಲಿಲ್ಲ.

https://youtu.be/TCwXccgngIk?si=ZOVMtOhhkejmOhvH

ಸಿಸಿಟಿವಿ ದೃಶ್ಯದಲ್ಲಿ ಶಿವರಾಜ್ ಒಬ್ಬರೇ ಬೆಂಗಳೂರು ವಿವಿಯೊಳಗೆ ನಡೆದುಕೊಂಡು ಹೋಗಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಇಲ್ಲಿ ಶೋಧ ನಡೆಸಿದಾಗ ಆವರಣದೊಳಗೆ ಇರುವ ಪಾಳು ಬಿದ್ದ ಬಾವಿಯಲ್ಲಿ ಅವರ ಮೃತ ದೇಹ ತೇಲುತ್ತಿರುವುದು ಕಂಡುಬಂದಿದೆ. ಬಳಿಕ ಅವರ ದೇಹವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹೀಗಾಗಿ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಶಿವರಾಜ್ ಅವರದ್ದು ಕೊಲೆಯಲ್ಲ ಆತ್ಮಹತ್ಯೆ ಎನ್ನುವ ನಿರ್ಧಾರಕ್ಕೆ ಪೊಲಿಸರು ಬಂದಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಮೂರು ತಿಂಗಳ ಹಿಂದಷ್ಟೇ ಶಿವರಾಜ್, ವಾಣಿ ಎಂಬಾಕೆಯನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ಬಳಿಕ ಪತ್ನಿ ಪತಿಯಿಂದ ದೂರವಾಗಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಶಿವರಾಜ್ ಹಾಗೂ ಕುಟುಂಬದವರ ವಿರುದ್ಧ ವಾಣಿ ದಾವಣಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೇಲಿಂದ ಮೇಲೆ ಬೆದರಿಕೆ ಹಾಕಿದ್ದಳು. ಕರ್ತವ್ಯಕ್ಕೆ ಹೊರಟ ಶಿವರಾಜ್ ನಾಪತ್ತೆಯಾಗಿದ್ದ, ಪತ್ನಿ ವಾಣಿ ಕಿರುಕುಳದಿಂದ ಬೇಸತ್ತು ಹೋಗಿದ್ದ ಎಂದು ಶಿವರಾಜ್ ಸಹೋದರ ದೂರಿನಲ್ಲಿ ಉಲ್ಲೇಖಿಸಿದ್ದರು.
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST