K2kannadanews.in
ರಾಯಚೂರು : ಜಿಲ್ಲಾಧಿಕಾರಿ ನಿತೀಶ್ ಕೆ ಅವರು ವಾಲ್ಮೀಕಿ ಪುತ್ತಳಿಗೆ ಪೂಜೆ ಸಲ್ಲಿಸುವ ಮೂಲಕ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಿದರು.
https://youtu.be/OO1coyzde80?si=RM4R9OyrS5KCYcDm
ರಾಯಚೂರು ನಗರದ ವಾಲ್ಮೀಕಿ ವೃತ್ತದಲ್ಲಿ ಇಂದು ಪುತ್ತಳಿಗೆ ಪೂಜೆ ಸಲ್ಲಿಸಿ ಮಹಾನರ್ಪಣೆ ಮಾಡುವ ಮುಖಾಂತರ ಜಯಂತಿಗೆ ಅದ್ದೂರಿ ಚಾಲನೆ ನೀಡಲಾಯಿತು ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂಸದ ಜಿ ಕುಮಾರ್ ನಾಯಕ್, ಶಾಸಕ ಶಿವರಾಜ್ ಪಾಟೀಲ್ ಅವರು ಈ ಒಂದು ಜಯಂತಿಯಲ್ಲಿ ಭಾಗವಹಿಸಿದ್ದರು.
ನಗರದ ವಾಲ್ಮೀಕಿ ವೃತ್ತದಿಂದ ಆಶಾಪುರ ರಸ್ತೆಯಲ್ಲಿರುವ ವಾಲ್ಮೀಕಿ ಭವನದ ವರೆಗೆ, ಮೆರವಣಿಗೆ ಮಾಡಲಾಯಿತು ಇನ್ನು ಈ ಒಂದು ಮೆರವಣಿಗೆಯಲ್ಲಿ ಮಹಿಳೆಯರು ಕುಂಭ ಹೊತ್ತು ಮುಂದೆ ಸಾಗಿದರು, ವಿವಿಧ ಕಲಾತಂಡಗಳು ಭಾಗವಹಿಸಿದ್ದವು. ವಾಲ್ಮಿಕಿ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದರು.