K2kannadanews.in
Dangerous video ಯಾದಗಿರಿ : ರಾಜ್ಯದ ಹಲವೆಡೆ ಪೂರ್ವ ಮುಂಗಾರು ಮಳೆ ಅಬ್ಬರಿಸುತ್ತಿದೆ. ಉತ್ತರ ಕರ್ನಾಟಕದ ಅಲ್ಲಲ್ಲಿ ಗಾಳಿ ಸಮೇತ ಮಳೆಯಾಗುತ್ತಿದ್ದು, ಮಳೆಯ ನೀರಿನಿಂದ ಅವಾಂತರಗಳೂ ಸಂಭವಿಸುತ್ತಿವೆ. ಮಳೆಯ ನಡುವೆ ಬೀಸಿದ ಭಾರೀ ಗಾಳಿಗೆ ಊರಿಗೆ ಊರೇ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಅಲ್ಲೋಲ ಕಲ್ಲೋಲ ಸೇಷ್ಟಿಸಿದೆ.
https://youtube.com/shorts/a1uwvJ0In1M?si=n-dUAiuM6CQPjtZ-
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಹಲವು ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಟಿವಿ, ಫ್ರಿಡ್ಜ್, ಫ್ಯಾನ್ ಗಳು ಹಾನಿಯಾಗಿವೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆ ಜನರು ಮನೆಗಳಿಂದ ಹೊರಗೋಡಿಬಂದು ಜೀವ ಉಳಿಸಿಕೊಂಡಿದ್ದಾರೆ.