LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆಯಲ್ಲಿ ಕೊಠಡಿ ಇಲ್ಲ ಮರದ ನೆರಳೆ ಕೊಠಡಿ..

K2kannadanews.in

Local News ರಾಯಚೂರು : ತಾಲೂಕಿನ ಭಾಯಿದೊಡ್ಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಬದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮರದ ನೆರಳಲ್ಲೆ ವಿದ್ಯಾರ್ಥಿಗಳು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಒಂದು ಪರಿಸ್ಥಿತಿ ನೋಡಿದ್ರೆ ನಮ್ಮ ಶಿಕ್ಷಣ ವ್ಯವಸ್ಥೆ ಎಲ್ಲಿದೆ ಎಂಬ ಪ್ರಶ್ನೆಗಳು ಉದ್ಭವವಾಗುತ್ತವೆ.

https://youtu.be/FituMn4PLwE?si=QrXq6FrOy5i7hXVP

ಹೌದು ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ 1ನೇ ತರಗತಿ ಯಿಂದ 7ನೇ ತರಗತಿಯವರೆಗೂ ವಿದ್ಯಾರ್ಥಿಗಳು ವ್ಯಾಸಂಗಮಾಡುತ್ತಾರೆ. 210 ವಿದ್ಯಾರ್ಥಿಗಳಿದ್ದು ಅಷ್ಟು ವಿದ್ಯಾರ್ಥಿಗಳಿಗೂ 5 ಕೊಠಡಿಗಳಿದ್ದು ಅದರಲ್ಲೇ ವಿದ್ಯಾರ್ಥಿಗಳು ಪಾಠ ಕೇಳಬೇಕು. ಕೆಲವು ತರಗತಿಗಳು ಕೊಠಡಿ ಒಳಗೆ ಪಾಠ ಮಾಡಿದರೆ ಇನ್ನುಳಿದ ಮಕ್ಕಳಿಗೆ ಮರದ ನೆರಳೆ ಪಾಠದ ಕೊಠಡಿಯಾಗಿದೆ. ಶಾಲೆಯ ಆವರಣದಲ್ಲಿ ಮಕ್ಕಳು ಪಾಠ ಕೇಳುವುದರಿಂದ ಗಾಳಿ ಮಳೆಯಿಂದ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮಸ್ಥರು ಹಲವವು ಬಾರಿ ದೂರು ಸಲ್ಲಿಸಿದರೂ ಪ್ರಯೋಜನೆಯಾಗಿಲ್ಲ ಎನ್ನುತ್ತಾರೆ. ಇದೀಗ ಎಸ್ ಡಿ ಎಂ ಸಿ ಅಧ್ಯಕ್ಷ ವೀರೇಶ್ ಅವರು ಸಿಇಓ, ಡಿಡಿಪಿಐ, ಇಓ ಶಾಲೆಯ ಹೆಚ್ಚುವರಿ ಕೊಠಡಿಗಳಿಗೆ ಮನವಿ ಸಲ್ಲಿಸಿದ್ದಾರೆ. ಮನವಿಗೆ ಸ್ಪಂದಿಸಿದ ಸಿಇಓ, ಇಓ ಅವರಿಗೆ ಸಮಸ್ಯೆಬಗ್ಗೆ ಸೂಕ್ತ ಪರಿಹಾರ ಒದಗಿಸಿ ಎಂದು ಪತ್ರ ರವಾನಿಸಿದ್ದರು. ಆದ್ರೆ ಸಿಇಓ ಒರೆದ ಪತ್ರಕ್ಕೆ ಇಓ ಯಾವುದೆ ರೀತಿಯ ಪ್ರತಿಕ್ರಿಯೆ ನೀಡದೆ ಇರುವುದು ಇಓ ಅವರ ನಿರ್ಲಕ್ಷ್ಯಕ್ಕೆ ಕೈ ಗನ್ನಡಿ ಯಾಗಿದೆ ಎಂದು ಅಸಮಧಾನ ವ್ಯಕ್ತವಾಗುತ್ತಿದೆ.

https://youtu.be/HvmUkWwki9c?si=eRkI0CLHw96L4RBy
Author
K2 Kannada News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST