K2kannadanews.in
Crime News ರಾಯಚೂರು : ಕೆಲಸ ಮುಗಿಸಿಕೊಂಡು ಒಂದೇ ಬೈಕ್ ನಲ್ಲಿ ನಾಲ್ಕು ಜನ ಮನೆಗೆ ತೆರಳುತ್ತಿದ್ದ ವೇಳೆ, ಬೈಕಿಗೆ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪವರ್ ಗ್ರಿಡ್ ಬಳಿ ನಡೆದಿದೆ.
https://youtu.be/laTkz6mFex4?si=s10549L4-VzL7HJe
ರಾಯಚೂರು ನಗರದ ಹೊರವಲಯದ ಪವರ್ ಗ್ರಿಡ್ ಬಳಿ ಅಪಘಾತ ಜರುಗಿದೆ. ಶರಣಬಸವ (28), ಶಿವು(26) ಸ್ಥಳದಲ್ಲೇ ಮೃತಪಟ್ಟ ಸವಾರರು. ಇಫಾನ್ ಮತ್ತು ಗರೀಬ್ ಎಂಬ ಇಬ್ಬರು ಯುವಕರು ಗಾಯಗೊಂಡಿದ್ದಾರೆ. ರಾಯಚೂರಿನಿಂದ ಕಲ್ಲೂರಿಗೆ ಒಂದೇ ಬೈಕನಲ್ಲಿ ಹೊರಟಿದ್ದ ನಾಲ್ವರು ಹೊರಟಿದ್ದರು, ಈ ವೇಳೆ ಪವರ್ ಗ್ರಿಡ್ ಬಳಿ ಬೈಕ್ಗೆ ಕಾರು ಡಿಕ್ಕಿ ಹೊಡೆದು ಹೋಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಕೆಳಗಿ ಬಿದ್ದಿದ್ದಾರೆ. ಇದೇ ಸಮಯಕ್ಕೆ ಹಿಂದೆ ಲಾರಿಯೊಂದು ವೇಗದಲ್ಲಿ ಚಲಿಸುತ್ತಿದ್ದ ಕಾರಣ ಇಬ್ಬರ ಮೇಲೆ ಲಾರಿ ಹರಿದಿದೆ ಎನ್ನಲಾಗುತ್ತಿದ್ದು, ಆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಬೈಕ್ ಸವಾರರು ಸಿರವಾರ ತಾಲೂಕಿನ ಕಲ್ಲೂರು ನಿವಾಸಿಗಳು ಎಂದು ಗುರುತಿಸಲಾಗಿದೆ. ಪ್ರಸ್ತುತ ಘಟನೆ ರಾಯಚೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.